ಆಸುರೀಶಕ್ತಿಗಳ ಪ್ರಾಬಲ್ಯದಿಂದ ಧರೆಯನ್ನು ರಕ್ಷಿಸುವುದು ಎಷ್ಟು ದುರ್ಗಮವೆಂಬುದನ್ನು ಸಾಕ್ಷ್ಯಪಡಿಸಿರುವ ಒಂದು ಇತ್ತೀಚಿನ ಪ್ರಕರಣವೆಂದರೆ ಎಂಡೋಸಲ್ಫಾನ್ ವಿರುದ್ಧ ಜನರು ನಡೆಸಬೇಕಾಗಿಬಂದ ದೀರ್ಘಸಮರ. ಈ ಕೀಟನಾಶಕ ಎಷ್ಟು ಮಾರಕವೆಂಬುದು ಈಗ್ಗೆ ಇಪ್ಪತ್ತು ವರ್ಷ ಹಿಂದೆಯೇ ಮನವರಿಕೆಯಾಗಿತ್ತು. ಇದರಿಂದ ಜನ್ಯವಾದ ವಿಷವು ನೆಲಜಲಮೂಲಗಳನ್ನೆಲ್ಲ ವ್ಯಾಪಿಸಿ ಜನರ ಮೆದುಳಿನ ಜೋಗರಿಕೆ, ದೈಹಿಕ-ಮಾನಸಿಕ ಮಾಂದ್ಯ, ಅಪಸ್ಮಾರ, ಪಿತ್ತಕೋಶದ ಮತ್ತು ರಕ್ತದ ಕ್ಯಾನ್ಸರ್, ಆಸ್ತಮಾ, ಸಂತಾನಹೀನತೆ ಮೊದಲಾದ ಹಲವಾರು ವ್ಯಾಧಿಗಳಿಗೆ ಎಂಡೋಸಲ್ಫಾನ್ ಕಾರಣವಾಗುವುದೆಂಬುದು ಸಿದ್ಧಪಟ್ಟಿದೆ. ಈ ಹಿನ್ನೆಲೆಯಿದ್ದರೂ – ವಿಶೇಷವಾಗಿ ದಕ್ಷಿಣಕನ್ನಡ, ಕಾಸರಗೋಡು, ಕೇರಳ ಭಾಗಗಳಲ್ಲಿ […]
ವಿಷದ ನಂಟು
Month : May-2017 Episode : Author :