
ಕನ್ನಡ ಸಾಹಿತ್ಯ ಪರಿಷತ್ತಿಗೆ ನೂರು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ (ಸ್ಥಾಪನೆ: ಕ್ರಿಶ ೧೯೧೫) ಪ್ರಕಟಿಸಲು ಉದ್ದೇಶಿಸಿರುವ ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆಯ ೧೭ ಸಂಪುಟಗಳಲ್ಲಿ ೧೪ನೇ ಸಂಪುಟವೇ ಮೊಟ್ಟಮೊದಲನೆಯದಾಗಿ ಬಿಡುಗಡೆಯಾಗಿದೆ. ಇತ್ತೀಚೆಗೆ ಶ್ರವಣಬೆಳಗೊಳದಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಬಿಡುಗಡೆಯಾದ ಈ `ವಿಜ್ಞಾನ ತಂತ್ರಜ್ಞಾನ’ ಸಂಪುಟವು ಅತ್ಯಂತ ಹೊಣೆಗಾರಿಕೆಯಿಂದ ಪ್ರಕಟಿಸಿದ ಸಂಪಾದಿತ ಕೃತಿಯಾಗಿದೆ. ವಿಜ್ಞಾನ ತಂತ್ರಜ್ಞಾನ ಕುರಿತು ಕನ್ನಡದಲ್ಲಿ ನಡೆದ ಸಾಹಿತ್ಯಕ ಪ್ರಯತ್ನಗಳ ಸಮಗ್ರ ಚಿತ್ರಣವನ್ನು ಅಚ್ಚುಕಟ್ಟಾಗಿ ಮತ್ತು ಕೊನೇಕ್ಷಣದ ಬೆಳವಣಿಗೆಗಳನ್ನೂ ಸೇರಿಸಿ ಪ್ರಕಟಿಸಿರುವುದು ಅಭಿನಂದನೀಯ. ಸ್ವತಃ ವಿಜ್ಞಾನ […]