ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > ಉತ್ಥಾನ ಸುದ್ದಿಗಳು > ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ-೨೦೨೩

ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ-೨೦೨೩

ಬೆಂಗಳೂರು, ಸೆ. 6, 2023: ಉತ್ಥಾನ ಮಾಸಪತ್ರಿಕೆಯು ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜಿಸಿದೆ.

ಉತ್ಥಾನ ಮಾಸಪತ್ರಿಕೆಯು ಕಳೆದ ೫ ದಶಕಗಳಿಂದ ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದೆ. ಈ ಬಾರಿಯ 2023೩ನೇ ಸಾಲಿನ ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಯನ್ನು ಆಹ್ವಾನಿಸಲಾಗಿದೆ.

ಬಹುಮಾನಗಳು:

ಮೊದಲನೆಯ ಬಹುಮಾನ ರೂ. 15,000

ಎರಡನೆಯ ಬಹುಮಾನ ರೂ. 12,000

ಮೂರನೆಯ ಬಹುಮಾನ ರೂ. 10,000

ಐದು ಮೆಚ್ಚುಗೆಯ ಬಹುಮಾನಗಳು ತಲಾ ರೂ. 2,000

ನಿಯಮಗಳು:

  • ಕಥೆ ೩,೦೦೦ ಪದಗಳ ಮಿತಿಯಲ್ಲಿ ಇರಬೇಕು.
  • ಕಥೆಗಳು ಸ್ವತಂತ್ರವಾಗಿರಬೇಕು. ಬೇರೆಲ್ಲೂ ಪ್ರಕಟಣೆ ಅಥವಾ ಸ್ವೀಕೃತವಾಗಿರಬಾರದು.
  • ಒಬ್ಬರು ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು.
  • ಕಥೆಗಳು ಸ್ವತಂತ್ರವಾಗಿರಬೇಕು. ಭಾಷಾಂತರವಾಗಲಿ, ಅನುಕರಣೆಯಾಗಲಿ ಆಗಿರಕೂಡದು. ಎಲ್ಲೂ ಸ್ವೀಕೃತವಾಗಿರಬಾರದು; ಪರಿಶೀಲನೆಗಾಗಿಯೂ ಯಾವುದೇ ಅನ್ಯ ಪತ್ರಿಕೆ, ಸಂಸ್ಥೆಗೆ ಕಳುಹಿಸಿರಬಾರದು. ಸಾಮಾಜಿಕ ಜಾಲತಾಣಗಳಲ್ಲೂ ಪ್ರಕಟವಾಗಿರಬಾರದು.
  • ಬಹುಮಾನಿತ ಕಥೆ ’ಉತ್ಥಾನ’ದಲ್ಲಿ ಪ್ರಕಟವಾಗುವವರೆಗೂ ಬೇರೆ ಎಲ್ಲೂ ಗ್ರಂಥರೂಪದಲ್ಲಾಗಲಿ, ಸಾಮಾಜಿಕ ಜಾಲತಾಣಗಳಲ್ಲಾಗಲಿ, ಪತ್ರಿಕೆ, ಆಕಾಶವಾಣಿ ಅಥವಾ ದೂರದರ್ಶನದಲ್ಲಾಗಲಿ ಪ್ರಕಟಣೆಗೆ, ಪ್ರಸಾರಕ್ಕೆ ಅವಕಾಶವಿಲ್ಲ.
  • ಕಾಗದದ ಒಂದೇ ಮಗ್ಗುಲಲ್ಲಿ ಸ್ಫುಟವಾಗಿ ಬರೆದಿರಬೇಕು ಅಥವಾ ವಿರಳವಾಗಿ ಬೆರಳಚ್ಚು ಮಾಡಿರಬೇಕು. ಕಾರ್ಬನ್/ಜೆರಾಕ್ಸ್ ಪ್ರತಿಗಳನ್ನು ಪರಿಶೀಲಿಸಲಾಗುವುದಿಲ್ಲ.
  • ಕಥೆಯನ್ನು ನುಡಿ ಅಥವಾ ಯೂನಿಕೋಡ್ ತಂತ್ರಾಂಶದಲ್ಲಿ ಸಿದ್ಧಪಡಿಸಿ (ವರ್ಡ್ ಮತ್ತು ಪಿಡಿಎಫ್ ೨ ರೂಪದಲ್ಲಿ) ಇ-ಮೇಲ್ ಮೂಲಕವೂ ಕಳುಹಿಸಬಹುದು. ಇ-ಮೇಲ್ ವಿಳಾಸ: [email protected]
  • ಹಸ್ತಪ್ರತಿಯನ್ನು ಹಿಂದಕ್ಕೆ ಕಳುಹಿಸುವ ಯಾವುದೇ ವ್ಯವಸ್ಥೆ ಇರುವುದಿಲ್ಲ. ಆದ್ದರಿಂದ ಲೇಖಕರು ಮೂಲಕಥೆಯ ಇನ್ನೊಂದು ಪ್ರತಿಯನ್ನು ತಮ್ಮ ಬಳಿ ಸುರಕ್ಷಿತವಾಗಿ ಇಟ್ಟುಕೊಳ್ಳುವುದು.
  • ಲೇಖಕರು ತಮ್ಮ ಹೆಸರು, ವಿಳಾಸ, ಕಿರುಪರಿಚಯ ಮುಂತಾದ ವಿವರಗಳನ್ನು ಕಥೆಯ ಜೊತೆಯಲ್ಲಿ ಬರೆಯದೆ, ಪ್ರತ್ಯೇಕ ಪುಟದಲ್ಲಿ ಬರೆದು ಕಳುಹಿಸಬೇಕು. ಜೊತೆಗೆ ಲೇಖಕರ ಭಾವಚಿತ್ರವೂ ಇರಬೇಕು.
  • ಬಹುಮಾನಿತ ಕಥೆಗಳನ್ನು ಯಾವುದೇ ರೂಪದಲ್ಲಿ, ಯಾವಾಗ ಬೇಕಾದರೂ ಬಳಸುವ ಸಂಪೂರ್ಣ ಹಕ್ಕು ’ಉತ್ಥಾನ’ದ್ದು.
  • ತೀರ್ಪುಗಾರರ ಮೌಲ್ಯನಿರ್ಣಯಾನಂತರ ಫಲಿತಾಂಶವನ್ನು ’ಉತ್ಥಾನ’ದಲ್ಲಿ ಪ್ರಕಟಿಸಲಾಗುವುದು. ವಿಜೇತರಿಗೆ ಮಾತ್ರ ಪತ್ರ ಬರೆದು ತಿಳಿಸಲಾಗುವುದು. ಅದಕ್ಕೆ ಪೂರ್ವದಲ್ಲಿ ಯಾವುದೇ ಪತ್ರವ್ಯವಹಾರ ಸಾಧ್ಯವಾಗದು.
  • ಸ್ಪರ್ಧೆಗೆ ಸಂಬಂಧಿಸಿದ ಎಲ್ಲ ವಿಚಾರಗಳಲ್ಲೂ ವ್ಯವಸ್ಥಾಪಕರದ್ದೇ ಅಂತಿಮ ತೀರ್ಮಾನ.

ಕಥೆಗಳು ತಲಪಲು ಕೊನೆಯ ದಿನಾಂಕ: ಅಕ್ಟೋಬರ್ 10, 2023

ವಿಳಾಸ: ಸಂಪಾದಕರು, ’ಉತ್ಥಾನ’ ವಾರ್ಷಿಕ ಕಥಾ ಸ್ಪರ್ಧೆ – 2023, ’ಕೇಶವ ಶಿಲ್ಪ’, ಕೆಂಪೇಗೌಡನಗರ, ಬೆಂಗಳೂರು 560 004

 ದೂರವಾಣಿ: 77954 41894 / 080-2660 4673  ಇ-ಮೇಲ್: u[email protected]

ನಿಮ್ಮ ಪ್ರತಿಕ್ರಿಯೆ ನೀಡಿ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ