ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > ಉತ್ಥಾನ ಸುದ್ದಿಗಳು > ತಪಸ್ ನ 14 ವಿದ್ಯಾರ್ಥಿಗಳು ಐಐಟಿಗೆ ಪ್ರವೇಶಾವಕಾಶ

ತಪಸ್ ನ 14 ವಿದ್ಯಾರ್ಥಿಗಳು ಐಐಟಿಗೆ ಪ್ರವೇಶಾವಕಾಶ

ರಾಷ್ಟ್ರೋತ್ಥಾನ ಪರಿಷತ್ ಸಂಚಾಲಿತ ತಪಸ್‌ನ 14 ವಿದ್ಯಾರ್ಥಿಗಳು ಇತ್ತೀಚೆಗೆ ಪ್ರಕಟಗೊಂಡ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಐಐಟಿಗೆ ಪ್ರವೇಶಾವಕಾಶ ಪಡೆದಿದ್ದಾರೆ.

ಆರ್ಥಿಕವಾಗಿ ಅತಿ ಹಿಂದುಳಿದ ಪರಿವಾರಗಳಿಂದ, ಸೆಕ್ಯುರಿಟಿ, ಹೌಸ್ ಕೀಪಿಂಗ್, ಗಾರ್ಮೆಂಟ್ಸ್, ರೈತ ಕೂಲಿಕಾರರು, ಸಂಚಾರಿ ವ್ಯಾಪಾರಿಗಳು ಇಂತಹ ಕುಟುಂಬಗಳಿಂದ ಬಂದಂತಹ ಮಕ್ಕಳ ಸಾಧನೆ ಪ್ರೇರಣೆ ನೀಡುವಂತಹುದು. ಅವಕಾಶ ವಂಚಿತ ಇಂತಹ ಮಕ್ಕಳಿಗಾಗಿ ರಾಷ್ಟ್ರೋತ್ಥಾನ ಪರಿಷತ್ ಹಾಗೂ ಬೇಸ್ ಸಂಸ್ಥೆಗಳು ಉಚಿತವಾಗಿ ಶಿಕ್ಷಣ, ವಸತಿ, ಇತ್ಯಾದಿ ವ್ಯವಸ್ಥೆಗಳನ್ನು ಕಲ್ಪಿಸಿ, ಐಐಟಿ-ಎನ್‌ಐಟಿಗಳಂತಹ ಪ್ರತಿಷ್ಠಿತ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಶ್ರಮಿಸುತ್ತಿದೆ.

ಈ ವರ್ಷ ಒಟ್ಟು 32 ವಿದ್ಯಾರ್ಥಿಗಳು ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಉತೀರ್ಣರಾಗಿ ಜೆಇಇ ಅಡ್ವಾನ್ಸ್ ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದರು. ಅಡ್ವಾನ್ಸ್ ಪರೀಕ್ಷೆ ಬರೆದ 32 ವಿದ್ಯಾರ್ಥಿಗಳಲ್ಲಿ 14 ಮಕ್ಕಳು ಐಐಟಿ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ. ಸೆಕ್ಯುರಿಟಿ ಗಾರ್ಡ್ ಅವರ ಮಗನಾದ ಪೃಥ್ವಿರಾಜ್ ಎಸ್‌ಟಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ 70ನೇ ರ‍್ಯಾಂಕ್ (sc) ಪಡೆದಿದ್ದಾರೆ. ತಂದೆಯನ್ನು ಕಳೆದುಕೊಂಡು, ತಾಯಿ ಮನೆಗೆಲಸ ಮಾಡಿ ಜೀವನ ನಡೆಸುತ್ತಿದ್ದ ಕುಟುಂಬದ ನವೀನ್ ಗೌಡ ಅವರು ಒಬಿಸಿ ವಿಭಾಗದಲ್ಲಿ 745 ರ‍್ಯಾಂಕ್, ತಪಟೂರಿನಲ್ಲಿ ಬಳೆ ವ್ಯಾಪಾರ ಮಾಡಿ ಜೀವನ ನಡೆಸುತ್ತಿದ್ದ ಕುಟುಂಬದಿಂದ ಬಂದ ಸಾತ್ವಿಕ್ ಇಎಡಬ್ಲ್ಯುಎಸ್ ವಿಭಾಗದಲ್ಲಿ 875ನೇ ರ‍್ಯಾಂಕ್, ಬೆಳಗಾವಿಯ ರೈತ ಕುಟುಂಬದ ಸಂಗ್ರಾಮ್ ಸಿಂಗ್ ಪಾಟೀಲ್ 1015 ರ‍್ಯಾಂಕ್, ಬಸ್ ಕಂಡೆಕ್ಟರ್ ಮಗನಾದ ಭವನ್ 1502 ರ‍್ಯಾಂಕ್, ಕಾಯಿಮಂಡಿ ವ್ಯಾಪಾರ ಮಾಡಿ ಜೀವನ ನಡೆಸುತ್ತಿದ್ದ ರಾಹುಲ್ ಟಿ.ಜಿ1842 ರ‍್ಯಾಂಕ್, ಎಸ್.ಸಿ. ವಿಭಾಗದಲ್ಲಿ ನೀಲಕಂಠ ಚವ್ಹಾಣ್ ೧೨೧೭ನೇ ರ‍್ಯಾಂಕ್ ಪಡೆದಿದ್ದಾರೆ.

ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ14ವಿದ್ಯಾರ್ಥಿಗಳ ವಿವರ

ರಾಜ್ಯದ ಸಾಮಾಜಿಕವಾಗಿ ಆರ್ಥಿಕವಾಗಿ ಬಡ ವಿದ್ಯಾರ್ಥಿಗಳಿಗೆ ಉಚಿತ ಪಿಯುಸಿ ಹಾಗೂ ಐಐಟಿ ಪ್ರವೇಶಕ್ಕೆ ಅಗತ್ಯ ತರಬೇತಿ ನೀಡುವ ಸಲುವಾಗಿ ರಾಷ್ಟ್ರೋತ್ಥಾನ ಪರಿಷತ್ ತಪಸ್ ಯೋಜನೆಯನ್ನು ೨೦೧೨ರಲ್ಲಿ ಆರಂಬಿಸಿತು. ಈವರೆಗೆ ೭ ತಂಡಗಳ ವಿದ್ಯಾರ್ಥಿಗಳು ತಪಸ್ ನಿಂದ ಹೊರಬಂದಿದ್ದು ೨೮೪ ಮಂದಿ ಬಡ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದಿದ್ದಾರೆ.

ಪತ್ರಿಕೆಗಳಲ್ಲಿ

ನಿಮ್ಮ ಪ್ರತಿಕ್ರಿಯೆ ನೀಡಿ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ